ಸರಿಯಾಗಿ ಇಪ್ಪತ್ತು ವರ್ಷಗಳ ಹಿಂದಿನ ಘಟನೆ. ನಾನಾಗ ಕುಶಾಲನಗರದ ಕೆ.ಬಿ.ಕಾಲೇಜಿನ ವಿದ್ಯಾರ್ಥಿಯಾಗಿದ್ದೆ. ದ್ವಿತೀಯ ಪಿ.ಯು.ಸಿ.ಫಲಿತಾಂಶ ಪ್ರಕಟವಾಗಿತ್ತು,ಆಗ ಮೊಬೈಲ್ ಇಲ್ಲದ ಕಾರಣ ಫಲಿತಾಂಶ ನೋಡಲು ಕಾಲೇಜಿಗೇ ಹೋಗಬೇಕಿತ್ತು. ನಾನೂ ನನ್ನ ಗೆಳೆಯ ದಿಲೀಪನೂ ಅಂದು ಕಾಲೇಜಿಗೆ ಹೋದೆವು. ಗೆಳೆಯ ಪಾಸಾಗಿದ್ದ ; ಕಾಲೇಜಿನ ಪ್ರಾಂಶುಪಾಲರು ನನ್ನನ್ನು ತಬ್ಬಿ ಮುದ್ದಾಡಿ ಅಭಿನಂದಿಸಿದರು . ಕಾಲೇಜಿನ ಇತಿಹಾಸದಲ್ಲಿ ಅತೀ ಹೆಚ್ಚು ಅಂಕ ಪಡೆದ ಶ್ರೇಯಸ್ಸು ನನ್ನದಾಗಿತ್ತು. ನನ್ನಮ್ಮಳಿಗೆ ಅಂಕಪಟ್ಟಿ ತೋರಿಸಲೆಂದು ಸಡಗರದಿಂದ ಮನೆಗೆ ಹೊರಟಾಗ ಒಂದು ಘಟನೆ ನಡೆಯಿತು. ಬಸ್ ಸ್ಟ್ಯಾಂಡಿನ ಹಿಂಬದಿ ಮೈದಾನದಲ್ಲಿ ಜನರ ಗುಂಪೊಂದಿತ್ತು. ಯಾರೋ ಒಬ್ಬ ಮಾನಸಿಕ ಅಸ್ವಸ್ಥನನ್ನು ಮರಕ್ಕೆ ಕಟ್ಟಿಹಾಕಿದ್ದರು. ಆ ಮನುಷ್ಯ ಬಲು ಕೆಟ್ಟದಾಗಿ ಎಲ್ಲರನ್ನೂ ಶಪಿಸುತ್ತಿದ್ದ. ಒಂದಿಬ್ಬರು ಕಲ್ಲೆಸೆಯುತ್ತಿದ್ದರು , ಕೆಲವರು ಜೋರಾಗಿ ನಗುತ್ತಿದ್ದರು. ನನಗೆ ಇದು ಸರಿ ಕಾಣಲಿಲ್ಲ , ಗೆಳೆಯನಿಗೆ ಈ ಮನುಷ್ಯನನ್ನ ಬಿಡಿಸುವ ಅಂದೆ. "ಈ ಹುಚ್ಚ ಯಾರಿಗೆ ಏನು ತೊಂದರೆ ಕೊಟ್ಟಿದ್ದಾನೋ ಗೊತ್ತಿಲ್ಲ , ಬಿಟ್ಟರೆ ಇನ್ನೇನು ಅನಾಹುತವಾಗುತ್ತೋ , ನಡಿ ಹೋಗೋಣ " ಅಂದ. ನನಗೂ ಸರಿಯೆನಿಸಿತು ಅವನ ಮುಖ ನೋಡಲೂ ಭಯವಾಗಿ ಸೀದಾ ಬಸ್ ಸ್ಟ್ಯಾಂಡಿನೊಳಗೆ ನಡೆದೆ. ನಮ್ಮೂರಿಗೆ ಹೋಗುವ ಬಸ್ಸಿನಲ್ಲಿ ಡ್ರೈವರ್ ಹಿಂದಿನ ಸೀಟು ಸಿಕ್ಕಿತು . ಇನ್ನೂ ಡ್ರೈವರ್ ಬರುವಷ್ಟರಲ್ಲಿ ಆ ಮಾನಸಿಕ ಅಸ್ವಸ್ಥ