Posts

Showing posts from July, 2022

ಹೀಗೊಂದು ಹತ್ಯೆ

ಸರಿಯಾಗಿ ಇಪ್ಪತ್ತು ವರ್ಷಗಳ ಹಿಂದಿನ ಘಟನೆ. ನಾನಾಗ ಕುಶಾಲನಗರದ ಕೆ.ಬಿ.ಕಾಲೇಜಿನ ವಿದ್ಯಾರ್ಥಿಯಾಗಿದ್ದೆ. ದ್ವಿತೀಯ ಪಿ.ಯು.ಸಿ.ಫಲಿತಾಂಶ ಪ್ರಕಟವಾಗಿತ್ತು,ಆಗ ಮೊಬೈಲ್ ಇಲ್ಲದ ಕಾರಣ ಫಲಿತಾಂಶ ನೋಡಲು ಕಾಲೇಜಿಗೇ ಹೋಗಬೇಕಿತ್ತು.  ನಾನೂ ನನ್ನ ಗೆಳೆಯ ದಿಲೀಪನೂ ಅಂದು ಕಾಲೇಜಿಗೆ ಹೋದೆವು. ಗೆಳೆಯ ಪಾಸಾಗಿದ್ದ ; ಕಾಲೇಜಿನ ಪ್ರಾಂಶುಪಾಲರು ನನ್ನನ್ನು ತಬ್ಬಿ ಮುದ್ದಾಡಿ ಅಭಿನಂದಿಸಿದರು . ಕಾಲೇಜಿನ ಇತಿಹಾಸದಲ್ಲಿ ಅತೀ ಹೆಚ್ಚು ಅಂಕ ಪಡೆದ ಶ್ರೇಯಸ್ಸು  ನನ್ನದಾಗಿತ್ತು. ನನ್ನಮ್ಮಳಿಗೆ ಅಂಕಪಟ್ಟಿ ತೋರಿಸಲೆಂದು ಸಡಗರದಿಂದ ಮನೆಗೆ ಹೊರಟಾಗ ಒಂದು ಘಟನೆ ನಡೆಯಿತು. ಬಸ್ ಸ್ಟ್ಯಾಂಡಿನ ಹಿಂಬದಿ ಮೈದಾನದಲ್ಲಿ ಜನರ ಗುಂಪೊಂದಿತ್ತು. ಯಾರೋ ಒಬ್ಬ ಮಾನಸಿಕ ಅಸ್ವಸ್ಥನನ್ನು ಮರಕ್ಕೆ ಕಟ್ಟಿಹಾಕಿದ್ದರು. ಆ ಮನುಷ್ಯ ಬಲು ಕೆಟ್ಟದಾಗಿ ಎಲ್ಲರನ್ನೂ ಶಪಿಸುತ್ತಿದ್ದ. ಒಂದಿಬ್ಬರು ಕಲ್ಲೆಸೆಯುತ್ತಿದ್ದರು , ಕೆಲವರು ಜೋರಾಗಿ ನಗುತ್ತಿದ್ದರು. ನನಗೆ ಇದು ಸರಿ ಕಾಣಲಿಲ್ಲ , ಗೆಳೆಯನಿಗೆ ಈ ಮನುಷ್ಯನನ್ನ ಬಿಡಿಸುವ ಅಂದೆ. "ಈ ಹುಚ್ಚ ಯಾರಿಗೆ ಏನು ತೊಂದರೆ ಕೊಟ್ಟಿದ್ದಾನೋ ಗೊತ್ತಿಲ್ಲ , ಬಿಟ್ಟರೆ ಇನ್ನೇನು ಅನಾಹುತವಾಗುತ್ತೋ , ನಡಿ ಹೋಗೋಣ " ಅಂದ. ನನಗೂ ಸರಿಯೆನಿಸಿತು ಅವನ ಮುಖ ನೋಡಲೂ ಭಯವಾಗಿ ಸೀದಾ ಬಸ್ ಸ್ಟ್ಯಾಂಡಿನೊಳಗೆ ನಡೆದೆ. ನಮ್ಮೂರಿಗೆ ಹೋಗುವ ಬಸ್ಸಿನಲ್ಲಿ ಡ್ರೈವರ್ ಹಿಂದಿನ ಸೀಟು ಸಿಕ್ಕಿತು . ಇನ್ನೂ ಡ್ರೈವರ್ ಬರುವಷ್ಟರಲ್ಲಿ ಆ ಮಾನಸಿಕ ಅಸ್ವಸ್ಥ